32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಅದರಲ್ಲಿಯೂ ಮುಖ್ಯವಾಗಿ ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈಧ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!