25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 29 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya
error: Content is protected !!