September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು.

ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಬೆಂಗಳೂರು ಕೆನರಾ ಬ್ಯಾಂಕ್, ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ತರಬೇತಿ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೆನರಾ ಬ್ಯಾಂಕ್ ಮುಖ್ಯ ಜನರಲ್ ಮ್ಯಾನೇಜರ್ ಕೆ.ಜೆ. ಶ್ರೀಕಾಂತ್, ಮಂಗಳೂರು ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೋಟಾರಿ ಭಾಗವಹಿಸಿದ್ದರು.

ಹಿರಿಯ ಕಛೇರಿ ಸಹಾಯಕ ಪ್ರಸಾದ ಪ್ರಾರ್ಥಿಸಿದರು. ರುಡ್ ಸೆಟ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ್ ಕುಮಾರ್ , ಸ್ವಾಗತಿಸಿ, ವರದಿ ವಾಚಿಸಿದರು. ಉಜಿರೆ ರುಡ್ ಸೆಟ್ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಉಜಿರೆ ರುಡ್ ಸೆಟ್ ಹಿರಿಯ ಅಧ್ಯಾಪಕಿ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!