25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!