September 6, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya
error: Content is protected !!