March 7, 2026
Uncategorized

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ಆ. 22 ನಡೆಯಿತು.

ಮುಂಡಾಜೆ ಆರೋಗ್ಯ ಇಲಾಖೆಗೆ ಖಾಯಂ ವೈದ್ಯಾಧಿಕಾರಿಯ ನೇಮಕವಾಗಬೇಕು. ಗರ್ಭಿಣಿಯರು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಕೆಲವೊಂದು ದಾಖಲೆಗೆ ಸಹಿ ಮಾಡಲು ಕೂಡ ಖಾಯಂ ವೈದ್ಯಾಧಿಕಾರಿ ಇರದಿರುವುದರಿಂದ ಸಮಸ್ಯೆ ಎದುರಾಗಿದೆ. ವೈದ್ಯಾಧಿಕಾರಿಯ ಮೊಬೈಲ್ ನಂಬರನ್ನು ಆಸ್ಪತ್ರೆಯ ಸಿಬ್ಬಂದಿಗಳು ಕೊಡುವುದಿಲ್ಲ ಯಾಕೆ? ವೈದ್ಯಾಧಿಕಾರಿ ಮೊಬೈಲ್ ನಂಬರನ್ನು ಬೋರ್ಡ್ ಮೇಲೆ ಹಾಕಬೇಕೆಂದು ನಾಮದೇವ್ ರಾವ್ ಆಗ್ರಹಿಸಿದರು.ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿಯಾದ ಪ್ರತಿಮಾ ಅವರು ಗ್ರಾಮ ಸಭೆಯನ್ನು ಉತ್ತಮವಾಗಿ ನಡೆಸಿಕೊಟ್ಟರು. ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಎಲ್ಲರನ್ನು ಸ್ವಾಗತಿಸಿ,ಅನುಪಾಲನಾ ವರದಿ ಮತ್ತು ಜಮಾಖರ್ಚಿನ ವಿವಿರವನ್ನು ಸಭೆಯ ಮುಂದಿಟ್ಟರು.ಪಂಚಾಯತ್ ಉಪಾದ್ಯಕ್ಷೆ ಸುಮಲತಾ, ಸದಸ್ಯರಾದ ಜಗದೀಶ,ರಿಶಾ ಪಟವರ್ಧನ್,ರವಿಚ್ಚಂದ್ರ,ಅಶ್ವಿನಿ,ಎ.ರಾಮಣ್ಣ ಶೆಟ್ಟಿ, ವಿಮಲ ಎಚ್.ಎಸ್,ರಂಜಿನಿ,ವಿಶ್ವನಾಥ ಶೆಟ್ಟಿ, ಯಶೋಧ ಉಪಸ್ಥಿತರಿದ್ದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿ ನೀಡಿದರು. ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya
error: Content is protected !!