23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ಇವರಿಗೆ ಆಗಸ್ಟ್ 22 ರಂದು ಮೈರೋಳ್ತಡ್ಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಶಿಕ್ಷಕ ವೃಂದ ಸಹಕಾರದಲ್ಲಿ ಅಭಿನಂದನಾ ಕಾರ್ಯಕ್ರಮ ನೇರವೇರಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಸುಚಿತ್ರಾ ಮೂರ್ತಾಜೆ, ಪರಮೇಶ್ವರಿ ಕೆ ಗೌಡ ಪುಯಿಲ, ಪ್ರಗತಿಪರ ಕೃಷಿಕ ಹಿರಿಯರಾದ ಕೃಷ್ಣಯ್ಯ ಆಚಾರ್ಯ, ಮೊಗ್ರು ಮುಗೇರಡ್ಕ ಶಾಲಾ ಮುಖ್ಯ ಶಿಕ್ಷಕರಾದ ಮಾಧವ ಗೌಡ, ಮೈರೋಳ್ತಡ್ಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರ್ಗಾವಣೆ ಪಡೆದು ಸನ್ಮಾನ ಸ್ವೀಕರಿಸೀದ ಶಿಕ್ಷಕಿ ಸುರೇಖಾ ಇವರು ನೆನಪಿಗಾಗಿ ತಾನು ಕರ್ತವ್ಯ ನಿರ್ವಹಿಸಿದ ಮೈರೋಳ್ತಡ್ಕ ಶಾಲೆಗೆ ದೊಡ್ಡ ಬೆಲ್ ಗಂಟೆ, ಲ್ಯಾಡರ್ ಕೊಡುಗೆ ನೀಡಿದರು. ನೆರೆದವರಿಗೆಲ್ಲರಿಗೂ ಮಧ್ಯಾಹ್ನ ದ ಭೋಜನೆ ವ್ಯವಸ್ಥೆಯನ್ನು ಮಾಡಿರುತ್ತಾರೆ.

Related posts

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya
error: Content is protected !!