ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ಇವರಿಗೆ ಆಗಸ್ಟ್ 22 ರಂದು ಮೈರೋಳ್ತಡ್ಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಶಿಕ್ಷಕ ವೃಂದ ಸಹಕಾರದಲ್ಲಿ ಅಭಿನಂದನಾ ಕಾರ್ಯಕ್ರಮ ನೇರವೇರಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಸುಚಿತ್ರಾ ಮೂರ್ತಾಜೆ, ಪರಮೇಶ್ವರಿ ಕೆ ಗೌಡ ಪುಯಿಲ, ಪ್ರಗತಿಪರ ಕೃಷಿಕ ಹಿರಿಯರಾದ ಕೃಷ್ಣಯ್ಯ ಆಚಾರ್ಯ, ಮೊಗ್ರು ಮುಗೇರಡ್ಕ ಶಾಲಾ ಮುಖ್ಯ ಶಿಕ್ಷಕರಾದ ಮಾಧವ ಗೌಡ, ಮೈರೋಳ್ತಡ್ಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರ್ಗಾವಣೆ ಪಡೆದು ಸನ್ಮಾನ ಸ್ವೀಕರಿಸೀದ ಶಿಕ್ಷಕಿ ಸುರೇಖಾ ಇವರು ನೆನಪಿಗಾಗಿ ತಾನು ಕರ್ತವ್ಯ ನಿರ್ವಹಿಸಿದ ಮೈರೋಳ್ತಡ್ಕ ಶಾಲೆಗೆ ದೊಡ್ಡ ಬೆಲ್ ಗಂಟೆ, ಲ್ಯಾಡರ್ ಕೊಡುಗೆ ನೀಡಿದರು. ನೆರೆದವರಿಗೆಲ್ಲರಿಗೂ ಮಧ್ಯಾಹ್ನ ದ ಭೋಜನೆ ವ್ಯವಸ್ಥೆಯನ್ನು ಮಾಡಿರುತ್ತಾರೆ.

Related posts

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya
error: Content is protected !!