ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಇದರ ವಾರ್ಷಿಕ ಮಹಾಸಭೆಯ ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಗೆ ಬೆಳ್ತಂಗಡಿಯ ವಲಯದ ಐದು ಸದಸ್ಯರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಧನರಾಜ್ ಶೆಟ್ಟಿ ಆಯ್ಕೆಯಾದರು.

ಈ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಎಂ ಆಯ್ಕೆಯಾದರು. ಉಪ ಕಾರ್ಯದರ್ಶಿ ಯಾಗಿ ಬೆನಕ ಸೌಂಡ್ಸ್ ನ ಮಾಲಕರಾದ ವಸಂತ ನಾವೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯಾಗಿ ಸಂಜೀವ ಬಿ.ಎಚ್ ಸಂಜಯ ಸೌಂಡ್ಸ್, ನಾರಾಯಣ ಗೌಡ ನಿಶ್ಮಿತಾ ಸೌಂಡ್ಸ್, ಜಿಲ್ಲಾ ಗೌರವ ಸಲಹೆಗಾರರಾಗಿ ತಾಲ್ಲೂಕಿನ ಉಪಾಧ್ಯಕ್ಷರಾದ ಜೋಸೆಫ್ ಕೆ.ಡಿ ಆಯ್ಕೆಯಾದರು.

ಮಹಾಸಭೆಯಲ್ಲಿ ಆಯ್ಕೆಯಾದ ಬಳಿಕ ನೂತನ ಸದಸ್ಯರಿಗೆ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಅಭಿನಂದನೆ ಸಲ್ಲಿಸಿದರು.

Leave a Comment

error: Content is protected !!