September 6, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya
error: Content is protected !!