July 23, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!