32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!