April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya
error: Content is protected !!