25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!