23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ಆ. 22 ನಡೆಯಿತು.

ಮುಂಡಾಜೆ ಆರೋಗ್ಯ ಇಲಾಖೆಗೆ ಖಾಯಂ ವೈದ್ಯಾಧಿಕಾರಿಯ ನೇಮಕವಾಗಬೇಕು. ಗರ್ಭಿಣಿಯರು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಕೆಲವೊಂದು ದಾಖಲೆಗೆ ಸಹಿ ಮಾಡಲು ಕೂಡ ಖಾಯಂ ವೈದ್ಯಾಧಿಕಾರಿ ಇರದಿರುವುದರಿಂದ ಸಮಸ್ಯೆ ಎದುರಾಗಿದೆ. ವೈದ್ಯಾಧಿಕಾರಿಯ ಮೊಬೈಲ್ ನಂಬರನ್ನು ಆಸ್ಪತ್ರೆಯ ಸಿಬ್ಬಂದಿಗಳು ಕೊಡುವುದಿಲ್ಲ ಯಾಕೆ? ವೈದ್ಯಾಧಿಕಾರಿ ಮೊಬೈಲ್ ನಂಬರನ್ನು ಬೋರ್ಡ್ ಮೇಲೆ ಹಾಕಬೇಕೆಂದು ನಾಮದೇವ್ ರಾವ್ ಆಗ್ರಹಿಸಿದರು.ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿಯಾದ ಪ್ರತಿಮಾ ಅವರು ಗ್ರಾಮ ಸಭೆಯನ್ನು ಉತ್ತಮವಾಗಿ ನಡೆಸಿಕೊಟ್ಟರು. ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಎಲ್ಲರನ್ನು ಸ್ವಾಗತಿಸಿ,ಅನುಪಾಲನಾ ವರದಿ ಮತ್ತು ಜಮಾಖರ್ಚಿನ ವಿವಿರವನ್ನು ಸಭೆಯ ಮುಂದಿಟ್ಟರು.ಪಂಚಾಯತ್ ಉಪಾದ್ಯಕ್ಷೆ ಸುಮಲತಾ, ಸದಸ್ಯರಾದ ಜಗದೀಶ,ರಿಶಾ ಪಟವರ್ಧನ್,ರವಿಚ್ಚಂದ್ರ,ಅಶ್ವಿನಿ,ಎ.ರಾಮಣ್ಣ ಶೆಟ್ಟಿ, ವಿಮಲ ಎಚ್.ಎಸ್,ರಂಜಿನಿ,ವಿಶ್ವನಾಥ ಶೆಟ್ಟಿ, ಯಶೋಧ ಉಪಸ್ಥಿತರಿದ್ದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿ ನೀಡಿದರು. ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!