July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ಇವರಿಗೆ ಆಗಸ್ಟ್ 22 ರಂದು ಮೈರೋಳ್ತಡ್ಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಶಿಕ್ಷಕ ವೃಂದ ಸಹಕಾರದಲ್ಲಿ ಅಭಿನಂದನಾ ಕಾರ್ಯಕ್ರಮ ನೇರವೇರಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಸುಚಿತ್ರಾ ಮೂರ್ತಾಜೆ, ಪರಮೇಶ್ವರಿ ಕೆ ಗೌಡ ಪುಯಿಲ, ಪ್ರಗತಿಪರ ಕೃಷಿಕ ಹಿರಿಯರಾದ ಕೃಷ್ಣಯ್ಯ ಆಚಾರ್ಯ, ಮೊಗ್ರು ಮುಗೇರಡ್ಕ ಶಾಲಾ ಮುಖ್ಯ ಶಿಕ್ಷಕರಾದ ಮಾಧವ ಗೌಡ, ಮೈರೋಳ್ತಡ್ಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರ್ಗಾವಣೆ ಪಡೆದು ಸನ್ಮಾನ ಸ್ವೀಕರಿಸೀದ ಶಿಕ್ಷಕಿ ಸುರೇಖಾ ಇವರು ನೆನಪಿಗಾಗಿ ತಾನು ಕರ್ತವ್ಯ ನಿರ್ವಹಿಸಿದ ಮೈರೋಳ್ತಡ್ಕ ಶಾಲೆಗೆ ದೊಡ್ಡ ಬೆಲ್ ಗಂಟೆ, ಲ್ಯಾಡರ್ ಕೊಡುಗೆ ನೀಡಿದರು. ನೆರೆದವರಿಗೆಲ್ಲರಿಗೂ ಮಧ್ಯಾಹ್ನ ದ ಭೋಜನೆ ವ್ಯವಸ್ಥೆಯನ್ನು ಮಾಡಿರುತ್ತಾರೆ.

Related posts

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya
error: Content is protected !!