September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 29 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya
error: Content is protected !!