24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಿಡುಗಡೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಆನಂದ್ ಭಟ್, ಸತೀಶ್ ಬೆಳ್ಳೊರು ಗುತ್ತು, ಗೌರವ ಅಧ್ಯಕ್ಷರಾದ ಡಾಕ್ಟರ್ ಪ್ರದೀಪ್ ನಾವೂರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಮನ್ನಡ್ಕ, ಪ್ರಾ.ಕಾರ್ಯದರ್ಶಿ ಗಣೇಶ್ ನಾವೂರು, ಧರ್ಣಪ್ಪ ಮೂಲ್ಯ ನಾವೂರು, ರಮೇಶ್ ಕೆಂಗಾಜೆ, ಪಳನಿ ಸ್ವಾಮಿ, ವಿನೋದ್ ಪ್ರಸಾದ್ ಕಲ್ಲಾಜೆ, ಶ್ರೀಧರ ಮುಗೇರ ನೇತ್ರಾವತಿ ನಗರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ವಿಜಯ ಹೊಡಿಕ್ಕಾರು, ನವೀನ್ ಜೈನ್, ಗಂಗಯ್ಯ ಮುಗೇರ ದೇವನಾರಿ, ರಾಘವೇಂದ್ರ ಗುಡಿಗಾರ್, ಶ್ರೀಕಾಂತ್ ಎಸ್ ಇಂದಬೆಟ್ಟು, ನಿತೇಶ್ ಕಡಿತ್ಯಾರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಸೆಪ್ಟೆಂಬರ್ 1 ರಂದು ದೇವನಾರಿಯಲ್ಲಿ ಕೆಸರು ಗದ್ದೆ ಕ್ರಿಡಾ ಕೂಟ ಹಾಗೂ ಸೆಪ್ಟೆಂಬರ್ 7 ಮತ್ತು 8 ರಂದು ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ.

Related posts

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ