23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya
error: Content is protected !!