April 2, 2025
Uncategorized

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ಆ. 22 ನಡೆಯಿತು.

ಮುಂಡಾಜೆ ಆರೋಗ್ಯ ಇಲಾಖೆಗೆ ಖಾಯಂ ವೈದ್ಯಾಧಿಕಾರಿಯ ನೇಮಕವಾಗಬೇಕು. ಗರ್ಭಿಣಿಯರು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಕೆಲವೊಂದು ದಾಖಲೆಗೆ ಸಹಿ ಮಾಡಲು ಕೂಡ ಖಾಯಂ ವೈದ್ಯಾಧಿಕಾರಿ ಇರದಿರುವುದರಿಂದ ಸಮಸ್ಯೆ ಎದುರಾಗಿದೆ. ವೈದ್ಯಾಧಿಕಾರಿಯ ಮೊಬೈಲ್ ನಂಬರನ್ನು ಆಸ್ಪತ್ರೆಯ ಸಿಬ್ಬಂದಿಗಳು ಕೊಡುವುದಿಲ್ಲ ಯಾಕೆ? ವೈದ್ಯಾಧಿಕಾರಿ ಮೊಬೈಲ್ ನಂಬರನ್ನು ಬೋರ್ಡ್ ಮೇಲೆ ಹಾಕಬೇಕೆಂದು ನಾಮದೇವ್ ರಾವ್ ಆಗ್ರಹಿಸಿದರು.ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿಯಾದ ಪ್ರತಿಮಾ ಅವರು ಗ್ರಾಮ ಸಭೆಯನ್ನು ಉತ್ತಮವಾಗಿ ನಡೆಸಿಕೊಟ್ಟರು. ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಎಲ್ಲರನ್ನು ಸ್ವಾಗತಿಸಿ,ಅನುಪಾಲನಾ ವರದಿ ಮತ್ತು ಜಮಾಖರ್ಚಿನ ವಿವಿರವನ್ನು ಸಭೆಯ ಮುಂದಿಟ್ಟರು.ಪಂಚಾಯತ್ ಉಪಾದ್ಯಕ್ಷೆ ಸುಮಲತಾ, ಸದಸ್ಯರಾದ ಜಗದೀಶ,ರಿಶಾ ಪಟವರ್ಧನ್,ರವಿಚ್ಚಂದ್ರ,ಅಶ್ವಿನಿ,ಎ.ರಾಮಣ್ಣ ಶೆಟ್ಟಿ, ವಿಮಲ ಎಚ್.ಎಸ್,ರಂಜಿನಿ,ವಿಶ್ವನಾಥ ಶೆಟ್ಟಿ, ಯಶೋಧ ಉಪಸ್ಥಿತರಿದ್ದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿ ನೀಡಿದರು. ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya
error: Content is protected !!