25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ಆ. 22 ನಡೆಯಿತು.

ಮುಂಡಾಜೆ ಆರೋಗ್ಯ ಇಲಾಖೆಗೆ ಖಾಯಂ ವೈದ್ಯಾಧಿಕಾರಿಯ ನೇಮಕವಾಗಬೇಕು. ಗರ್ಭಿಣಿಯರು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಕೆಲವೊಂದು ದಾಖಲೆಗೆ ಸಹಿ ಮಾಡಲು ಕೂಡ ಖಾಯಂ ವೈದ್ಯಾಧಿಕಾರಿ ಇರದಿರುವುದರಿಂದ ಸಮಸ್ಯೆ ಎದುರಾಗಿದೆ. ವೈದ್ಯಾಧಿಕಾರಿಯ ಮೊಬೈಲ್ ನಂಬರನ್ನು ಆಸ್ಪತ್ರೆಯ ಸಿಬ್ಬಂದಿಗಳು ಕೊಡುವುದಿಲ್ಲ ಯಾಕೆ? ವೈದ್ಯಾಧಿಕಾರಿ ಮೊಬೈಲ್ ನಂಬರನ್ನು ಬೋರ್ಡ್ ಮೇಲೆ ಹಾಕಬೇಕೆಂದು ನಾಮದೇವ್ ರಾವ್ ಆಗ್ರಹಿಸಿದರು.ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿಯಾದ ಪ್ರತಿಮಾ ಅವರು ಗ್ರಾಮ ಸಭೆಯನ್ನು ಉತ್ತಮವಾಗಿ ನಡೆಸಿಕೊಟ್ಟರು. ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಎಲ್ಲರನ್ನು ಸ್ವಾಗತಿಸಿ,ಅನುಪಾಲನಾ ವರದಿ ಮತ್ತು ಜಮಾಖರ್ಚಿನ ವಿವಿರವನ್ನು ಸಭೆಯ ಮುಂದಿಟ್ಟರು.ಪಂಚಾಯತ್ ಉಪಾದ್ಯಕ್ಷೆ ಸುಮಲತಾ, ಸದಸ್ಯರಾದ ಜಗದೀಶ,ರಿಶಾ ಪಟವರ್ಧನ್,ರವಿಚ್ಚಂದ್ರ,ಅಶ್ವಿನಿ,ಎ.ರಾಮಣ್ಣ ಶೆಟ್ಟಿ, ವಿಮಲ ಎಚ್.ಎಸ್,ರಂಜಿನಿ,ವಿಶ್ವನಾಥ ಶೆಟ್ಟಿ, ಯಶೋಧ ಉಪಸ್ಥಿತರಿದ್ದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿ ನೀಡಿದರು. ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya
error: Content is protected !!