26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ಇವರಿಗೆ ಆಗಸ್ಟ್ 22 ರಂದು ಮೈರೋಳ್ತಡ್ಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಶಿಕ್ಷಕ ವೃಂದ ಸಹಕಾರದಲ್ಲಿ ಅಭಿನಂದನಾ ಕಾರ್ಯಕ್ರಮ ನೇರವೇರಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಸುಚಿತ್ರಾ ಮೂರ್ತಾಜೆ, ಪರಮೇಶ್ವರಿ ಕೆ ಗೌಡ ಪುಯಿಲ, ಪ್ರಗತಿಪರ ಕೃಷಿಕ ಹಿರಿಯರಾದ ಕೃಷ್ಣಯ್ಯ ಆಚಾರ್ಯ, ಮೊಗ್ರು ಮುಗೇರಡ್ಕ ಶಾಲಾ ಮುಖ್ಯ ಶಿಕ್ಷಕರಾದ ಮಾಧವ ಗೌಡ, ಮೈರೋಳ್ತಡ್ಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರ್ಗಾವಣೆ ಪಡೆದು ಸನ್ಮಾನ ಸ್ವೀಕರಿಸೀದ ಶಿಕ್ಷಕಿ ಸುರೇಖಾ ಇವರು ನೆನಪಿಗಾಗಿ ತಾನು ಕರ್ತವ್ಯ ನಿರ್ವಹಿಸಿದ ಮೈರೋಳ್ತಡ್ಕ ಶಾಲೆಗೆ ದೊಡ್ಡ ಬೆಲ್ ಗಂಟೆ, ಲ್ಯಾಡರ್ ಕೊಡುಗೆ ನೀಡಿದರು. ನೆರೆದವರಿಗೆಲ್ಲರಿಗೂ ಮಧ್ಯಾಹ್ನ ದ ಭೋಜನೆ ವ್ಯವಸ್ಥೆಯನ್ನು ಮಾಡಿರುತ್ತಾರೆ.

Related posts

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya
error: Content is protected !!