ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!