25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya
error: Content is protected !!