July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

ನಡ : ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿಯಲ್ಲಿ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಇವರ ವತಿಯಿಂದ ನಡ ಸರಕಾರಿ ಪ್ರೌಢಶಾಲೆಯಲ್ಲಿ ಮಾಹಿತಿ ಶಿಕ್ಷಣ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಮೂಲ್ಯ ಸಂಪತ್ತಾದ ನೀರಿನ ಮಹತ್ವ, ನೀರಿನ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಗ್ರಾಮ ನಿರ್ಮಾಣದಲ್ಲಿ ನಮ್ಮ ಪಾತ್ರ, ಮೊಬೈಲ್ ಬಳಕೆಯ ದುಷ್ಪರಿಣಾಮಗಳು ವಿಚಾರವಾಗಿ ವಿದ್ಯಾರ್ಥಿಗಳಿಗೆ ಚಿತ್ರ ಪ್ರದರ್ಶನ ಮತ್ತು ಮಾಹಿತಿ ನೀಡಲಾಯಿತು.

ಜಿಲ್ಲಾ ಸಂಯೋಜಕ ಶಿವರಾಮ್ ನೀರಿನ ಸದ್ಭಳಕೆ, ಸ್ವಚ್ಛ ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಮತ್ತು ಸಮುದಾಯದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ “ನೀರು ನೈರ್ಮಲ್ಯ ಹೊಂದಿರುವ ಆದರ್ಶ ಗ್ರಾಮ” ಮತ್ತು “ಕಲುಷಿತ ನೀರಿನ ದುಷ್ಪರಿಣಾಮಗಳು ಮತ್ತು ಅತಿಸಾರ ತಡೆಗಟ್ಟುವಿಕೆ” ವಿಷಯಗಳ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಸಾನ್ವಿ, ರಝ್ಮಿನಾ ಫಾತಿಮಾ,ರೇಣುಕಾ, ಧನ್ಯಶ್ರೀ, ಭಾಗ್ಯಶ್ರೀ ಈ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.


ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Related posts

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya
error: Content is protected !!