22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 2023-24 ನೇ ಸಾಲಿನ ಜಮಾಬಂದಿ ಹಾಗೂ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಪುಸ್ತಕಕ್ಕೆ ವಿಶ್ವ ದಾಖಲೆಗೆ ರಾಜ್ಯ ಮಟ್ಟದ ಕಾವ್ಯ ಚೇತನ ಪ್ರಶಸ್ತಿ ಪಡೆದ ಚಂದ್ರಹಾಸ ಕುಂಬಾರ ಬಂದಾರು ಮತ್ತು ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅವಳಿ ಚಿನ್ನದ ಪದಕ ಪಡೆದ ಕು. ತೇಜಶ್ವಿನಿ ಪೂಜಾರಿ ಬಂದಾರು ಇವರಿಗೆ ಆಗಸ್ಟ್ 23 ರಂದು ಪಂಚಾಯತ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನೋಡೆಲ್ ಅಧಿಕಾರಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್, ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಗಫೂರ್, ದ್ವಿತೀಯ ದರ್ಜೆ ಸಹಾಯಕ ಹೆರಾಲ್ಡ್, ಪಂಚಾಯತ್ ಉಪಸ್ಥಿತರಿದ್ದರು.

ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಸದಸ್ಯರಾದ ,ಗಂಗಾಧರ ಪೂಜಾರಿ ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, , ಪರಮೇಶ್ವರಿ ಪುಯಿಲ, ಮಂಜುಶ್ರೀ ಊoತನಾಜೆ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಗ್ರಾಮಸ್ಥರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya
error: Content is protected !!