ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

Updated on:

ವೇಣೂರು ವಲಯದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಉಂಬೆಟ್ಟು ಇಲ್ಲಿಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು ಇದನ್ನು ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಜೈನ್, ಶಾಲೆಯ ಮುಖ್ಯೋಪಾಧ್ಯಾಯರಾದ ವಿನೋದ, ಸಿ ಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಮಾಜಿ ಸದಸ್ಯ ಯುವ ಉದ್ಯಮಿ ರಾಜೇಶ್ ಪೂಜಾರಿ ಮೂಡು ಕೋಡಿ , ಸದಸ್ಯರಾದ ವೀಣಾ, ವಲಯದ ಮೇಲ್ವಿಚಾರಕರಾದ ಶಾಲಿನಿ , ಸೇವಾಪ್ರತಿನಿಧಿ ಸುನೀತಾ , ಒಕ್ಕೂಟದ ಅಧ್ಯಕ್ಷೆ ನಳಿನಿ, ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಊರಿನ ಗಣ್ಯರು ಮತ್ತು ಉಪಸ್ಥಿತರಿದ್ದರು.

Leave a Comment

error: Content is protected !!