23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು. ಕಾಮಗಾರಿ ನಿರ್ವಹಣೆಯಲ್ಲಿ ಕತ೯ವ್ಯ ಲೋಪವಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 15 ನೇ ಹಣಕಾಸಿನ ಯೋಜನೆಯ 2021-22 ರಲ್ಲಿ ನಡೆದ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು ಈ ಸಂಬಂಧ ಬೆಂಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಇದೀಗ ಕ್ರಮ ಕೈಗೊಳ್ಳಲು ವರದಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು ಗ್ರಾಮ ಪಂಚಾಯತ್ ನಲ್ಲಿ 13 ಕಾಮಗಾರಿಯಲ್ಲಿ ಲೋಪವಾಗಿರುವುದು ತನಿಖೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅದಲ್ಲದೆ ಲೋಕಾಯುಕ್ತ ಪೊಲೀಸರು ವರದಿಯಲ್ಲಿ 7 ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಜು.9,10 ರಂದು ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ತನಿಖೆ ಮಾಡಿ ಹೋಗಿದ್ದರು.

ಬೆಂಗಳೂರು ಲೋಕಾಯುಕ್ತ ತಾಂತ್ರಿಕ ವಿಭಾಗದ ಲೆಕ್ಕ ಪರಿಶೋಧನ ಅಧಿಕಾರಿ ಹಾಗೂ ತನಿಖಾಧಿಕಾರಿ ಬಣಕಾರ್ ಪ್ರಕಾಶ್ ಕುಮಾರ್ ಮತ್ತು ತಾಂತ್ರಿಕ ವಿಭಾಗದ ಸಹಾಯಕ ಇಂಜಿಯರ್ ತೇಜ.ಶ್ರಿ.ಮದ್ದೋಡಿ ಅವರು ತನಿಖೆ ನಡೆಸಿದ ವರದಿಯಲ್ಲಿ. ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ಇಂಜಿನಿಯರ್ ಹರ್ಷಿತ್ .ಪಿಡಿಓ ಸವಿತಾ, ಇಂದಬೆಟ್ಟು ಗ್ರಾ.ಪಂ ಅಧ್ಯಕ್ಷ ಅನಂದ.ಎ, ನಿವೃತ್ತ ಪಂಚಾಯತ್ ರಾಜ್ ಕಿರಿಯ ಇಂಜಿನಿಯರ್ ಮೊಹಮ್ಮದ್ ಪಿ ಇವರು ನಾಲ್ಕು ಜನ ಕರ್ತವ್ಯ ಲೋಪ ಎಸಗಿರುವುದಾಗಿ ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ನಾಲ್ಕು ಜನರ ವಿರುದ್ಧ ಕ್ರಮ ಕೈಗೊಳ್ಳಲು ಆ.5 ರಂದು ವರದಿ ಸಲ್ಲಿಸಿದ್ದಾರೆ.

Related posts

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!