July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

ನಡ : ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿಯಲ್ಲಿ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಇವರ ವತಿಯಿಂದ ನಡ ಸರಕಾರಿ ಪ್ರೌಢಶಾಲೆಯಲ್ಲಿ ಮಾಹಿತಿ ಶಿಕ್ಷಣ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಮೂಲ್ಯ ಸಂಪತ್ತಾದ ನೀರಿನ ಮಹತ್ವ, ನೀರಿನ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಗ್ರಾಮ ನಿರ್ಮಾಣದಲ್ಲಿ ನಮ್ಮ ಪಾತ್ರ, ಮೊಬೈಲ್ ಬಳಕೆಯ ದುಷ್ಪರಿಣಾಮಗಳು ವಿಚಾರವಾಗಿ ವಿದ್ಯಾರ್ಥಿಗಳಿಗೆ ಚಿತ್ರ ಪ್ರದರ್ಶನ ಮತ್ತು ಮಾಹಿತಿ ನೀಡಲಾಯಿತು.

ಜಿಲ್ಲಾ ಸಂಯೋಜಕ ಶಿವರಾಮ್ ನೀರಿನ ಸದ್ಭಳಕೆ, ಸ್ವಚ್ಛ ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಮತ್ತು ಸಮುದಾಯದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ “ನೀರು ನೈರ್ಮಲ್ಯ ಹೊಂದಿರುವ ಆದರ್ಶ ಗ್ರಾಮ” ಮತ್ತು “ಕಲುಷಿತ ನೀರಿನ ದುಷ್ಪರಿಣಾಮಗಳು ಮತ್ತು ಅತಿಸಾರ ತಡೆಗಟ್ಟುವಿಕೆ” ವಿಷಯಗಳ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಸಾನ್ವಿ, ರಝ್ಮಿನಾ ಫಾತಿಮಾ,ರೇಣುಕಾ, ಧನ್ಯಶ್ರೀ, ಭಾಗ್ಯಶ್ರೀ ಈ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.


ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!