ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್, ಮಂಗಳೂರು ಇವರ ನೇತೃತ್ವದಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಆ 23ರಂದು
ಪಟ್ರಮೆ ಶಾಲೆಯಲ್ಲಿ ನಡೆಯಿತು.

ಸ ಉ ಹಿ ಪ್ರಾ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಡೀಕಯ್ಯ, ಅನಾರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಹಿರಿಯ ಸಂಚಾಲಕ ಭುಜಬಲಿ, ಅರುಣ್, ಗುರುಗಳು ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ, ಪಟ್ರಮೆ ಗ್ರಾ.ಪಂ.ಸದಸ್ಯರಾದ ಶ್ರೀಮತಿ ಗಿರಿಜಾ, ಪಟ್ರಮೆ ಮಾಜಿ ಗ್ರಾ,ಪಂ.ಸದಸ್ಯ ಶ್ಯಾಮರಾಜ್. ಉಪಸ್ಥಿತರಿದ್ದರು .

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು. ವಿವಿಧ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಮತ್ತು ಸದಸ್ಯರು. ಗ್ರಾಮಸ್ಥರು ಭಾಗವಹಿಸಿದ್ದರು.

Leave a Comment

error: Content is protected !!