23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್.ಗುರುವಾಯನಕೆರೆ‌ ವ್ಯಾಪ್ತಿಯ ಹೊಸಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾದ ರಾಜ್ಯ ಪ್ರಶಸ್ತಿ ಪಡೆದ ಸೋಮಶೇಖರ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರುವಂತೆ ಮಾರ್ಗದರ್ಶನ ನೀಡಿದರು ಹಾಗೂ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮುಕುಂದ ಚಂದ್ರ .ಎಲ್ ಎಮ್.ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಜನ ಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್ ಹಾಗೂ ತಾಲೂಕು ಜನ ಜಾಗೃತಿ ಸದಸ್ಯರಾದ ವಿಠ್ಠಲ ಸಿ ಪೂಜಾರಿ ಹಾಗೂ ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಧರ್ ನಿರೂಪಿಸಿ ಸೇವಾ ಪ್ರತಿನಿಧಿ ಶ್ರೀಮತಿ ಮಮತಾ ಸ್ವಾಗತಿಸಿ, ಶಿಕ್ಷಕರಾದ ಹರಿಪ್ರಸಾದ್ ವಂದನಾರ್ಪಣೆ ಮಾಡಿದರು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya
error: Content is protected !!