25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

ಕನ್ಯಾಡಿ-2: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು .ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು ಇದರ ಪ್ರಯುಕ್ತ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಯಲ್ಲಿ ಆಚರಿಸಲಾಯಿತು.


ಆ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಷೇಶತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಬಹಳ ಅರ್ಥವತ್ತಾಗಿ ಆಚರಿಸಲಾಯಿತು.

Related posts

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!