25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆ.23 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟು ಇಲ್ಲಿ ನಡೆದ ವಲಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವೀರೋಚಿತ ಆಟದ ಪ್ರದರ್ಶನಗಳನ್ನು ನೀಡಿದ ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ಫೈನಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದೆ.


ತಂಡದಲ್ಲಿ ಸುಹೈಲ್(7ನೇ ತರಗತಿ) ಬೆಸ್ಟ್ ರೈಡರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರೆ, ಸಫ್ವಾನ್ (7ನೇ), ಶಾದ್ದಾದ್ (7ನೇ), ಆಶಿರ್ ಜವಾದ್ (7ನೇ), ಶಮ್ಮಾಸ್ (7ನೇ), ಇಶಾಮ್ ಅಲಿ (7ನೇ), ಮಹಮ್ಮದ್ ಫಾಜ್ (7ನೇ), ಮೊಹಮ್ಮದ್ ಆಶಿರ್ (7ನೇ), ಸುಫೈನ್ (7ನೇ), ಸಾಬಿತ್(7ನೇ), ತಮೀಮ್ (6ನೇ), ಆಶಿಮ್(6ನೇ) ಇವರು ಕಡೆಯವರೆಗೂ ಪಂದ್ಯಾಟಗಳ ಸ್ಥಿತಿಯನ್ನೇ ಬದಲಾಯಿಸಿ ಮನ್ ಶರ್ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಲು ಪ್ರಮುಖ ಪಾತ್ರ ವಹಿಸಿದರು.


ಪಂದ್ಯಾಟದ ಸಮಯದಲ್ಲಿ ಹಾಗೆಯೇ ಸಮಾರೋಪ ಕಾರ್ಯಕ್ರಮದಲ್ಲಿ ಮನ್ ಶರ್ ವಿದ್ಯಾಸಂಸ್ಥೆಯ ಶಿಕ್ಷಕಿಯರಾದ ರಮ್ಯಾ ಆರ್ ಹಾಗೂ ಸುಧಾ ಬಿ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಮಿತ್ತಬಾಗಿಲು: ಶ್ರೀಮತಿ ನೀಲಮ್ಮ ನಿಧನ

Suddi Udaya
error: Content is protected !!