23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಿಂದ ಮೂವರು ಗಾಯಗೊಂಡಿರುವ ಕುರಿತು ನಾಳ ಸಮೀಪದ ನ್ಯಾಯತರ್ಪು ನಿವಾಸಿ ಅನುಷ ಬಿ. (27ವ) ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.20 ರಂದು ರಾತ್ರಿ, ಅಶ್ವಥ್ ರವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಸವಾರನಾಗಿ ಅಶ್ವಥ್ ರವರು ಹಾಗೂ ಸಹಸವಾರಳಾಗಿ ಅನುಷ ಹಾಗೂ ಅನುಷ ರವರ ಮಗ ರಿದ್ವಿನ್ ರವರನ್ನು ಕುಳ್ಳಿರಿಸಿಕೊಂಡು ಗೇರುಕಟ್ಟೆ ಕಡೆಯಿಂದ ಗೋವಿಂದೂರು ಕಡೆ ತೆರಳುತ್ತಾ ಕಳಿಯ ಗ್ರಾಮದ ತಾರಿದಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅಶ್ವಥ್ ರವರು ಸದ್ರಿ ದ್ವಿಚಕ್ರ ವಾಹನವನ್ನು ದುಡುಕುತನದಿಂದ ಸವಾರಿ ಮಾಡಿದ ಪರಿಣಾಮ, ಅನುಷ ಹಾಗೂ ರಿದ್ವಿನ್ ಹಾಗೂ ಅಶ್ವಥ್ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಗಾಯಾಳುಗಳು ಚಿಕತ್ಸೆಗಾಗಿ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 87/2024 ಕಲಂ: 281, 125(A), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
error: Content is protected !!