September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಿಂದ ಮೂವರು ಗಾಯಗೊಂಡಿರುವ ಕುರಿತು ನಾಳ ಸಮೀಪದ ನ್ಯಾಯತರ್ಪು ನಿವಾಸಿ ಅನುಷ ಬಿ. (27ವ) ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.20 ರಂದು ರಾತ್ರಿ, ಅಶ್ವಥ್ ರವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಸವಾರನಾಗಿ ಅಶ್ವಥ್ ರವರು ಹಾಗೂ ಸಹಸವಾರಳಾಗಿ ಅನುಷ ಹಾಗೂ ಅನುಷ ರವರ ಮಗ ರಿದ್ವಿನ್ ರವರನ್ನು ಕುಳ್ಳಿರಿಸಿಕೊಂಡು ಗೇರುಕಟ್ಟೆ ಕಡೆಯಿಂದ ಗೋವಿಂದೂರು ಕಡೆ ತೆರಳುತ್ತಾ ಕಳಿಯ ಗ್ರಾಮದ ತಾರಿದಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅಶ್ವಥ್ ರವರು ಸದ್ರಿ ದ್ವಿಚಕ್ರ ವಾಹನವನ್ನು ದುಡುಕುತನದಿಂದ ಸವಾರಿ ಮಾಡಿದ ಪರಿಣಾಮ, ಅನುಷ ಹಾಗೂ ರಿದ್ವಿನ್ ಹಾಗೂ ಅಶ್ವಥ್ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಗಾಯಾಳುಗಳು ಚಿಕತ್ಸೆಗಾಗಿ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 87/2024 ಕಲಂ: 281, 125(A), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!