23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಕೆಲವೊಂದು ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಪ್ರಸ್ತುತ ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲೂ ಕೂಡಾ ಅವಕಾಶ ಕಲ್ಪಿಸಿರುತ್ತದೆ. ಜೀವಮಾಪನ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡುವುದು. ಸರಕಾರವು ಆ.31 ರವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಜೀವಮಾಪನ ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿ ಕೊಳ್ಳಬೇಕು.

ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿ ಕೊಳ್ಳಲು ಅವಕಾಶವಿದೆ. ಪಡಿತರಚೀಟಿದಾರರ ಎಲ್ಲಾ ಸದಸ್ಯರ ಬಯೋದೃಢೀಕರಣ ಮಾಡಿಸಬೇಕು. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ದೃಢಪತ್ರ,ಆಧಾರ್ ಸಂಖ್ಯೆ, ಫೋನ್ ನಂಬರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಜಿಲ್ಲೆಯ ಹಾಗೂ ಪರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿ ಕೊಳ್ಳದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ರದ್ದಾಗಬಹುದು. ಪಡಿತರ ಚೀಟಿಗಳಲ್ಲಿ ಭಾಗಶ: ಜೀವಮಾನ ನೀಡಲ್ಪಟ್ಟು ಬಾಕಿ ಉಳಿದಿರುವ ಸದಸ್ಯರು ಕೂಡಾ ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿ ಕೊಂಡು ಪಡಿತರ ಚೀಟಿಯನ್ನು ಊರ್ಜಿತವಾಗಿರಿಸಿಕೊಳ್ಳಬಹುದಾಗಿರುತ್ತದೆ

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!