April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!