25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya
error: Content is protected !!