September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya
error: Content is protected !!