July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya
error: Content is protected !!