25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

ಕನ್ಯಾಡಿ-2: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು .ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು ಇದರ ಪ್ರಯುಕ್ತ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಯಲ್ಲಿ ಆಚರಿಸಲಾಯಿತು.


ಆ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಷೇಶತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಬಹಳ ಅರ್ಥವತ್ತಾಗಿ ಆಚರಿಸಲಾಯಿತು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya
error: Content is protected !!