ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

ಕನ್ಯಾಡಿ-2: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು .ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು ಇದರ ಪ್ರಯುಕ್ತ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಯಲ್ಲಿ ಆಚರಿಸಲಾಯಿತು.


ಆ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಷೇಶತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಬಹಳ ಅರ್ಥವತ್ತಾಗಿ ಆಚರಿಸಲಾಯಿತು.

Related posts

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!