ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

Updated on:

ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಿಂದ ಮೂವರು ಗಾಯಗೊಂಡಿರುವ ಕುರಿತು ನಾಳ ಸಮೀಪದ ನ್ಯಾಯತರ್ಪು ನಿವಾಸಿ ಅನುಷ ಬಿ. (27ವ) ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.20 ರಂದು ರಾತ್ರಿ, ಅಶ್ವಥ್ ರವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಸವಾರನಾಗಿ ಅಶ್ವಥ್ ರವರು ಹಾಗೂ ಸಹಸವಾರಳಾಗಿ ಅನುಷ ಹಾಗೂ ಅನುಷ ರವರ ಮಗ ರಿದ್ವಿನ್ ರವರನ್ನು ಕುಳ್ಳಿರಿಸಿಕೊಂಡು ಗೇರುಕಟ್ಟೆ ಕಡೆಯಿಂದ ಗೋವಿಂದೂರು ಕಡೆ ತೆರಳುತ್ತಾ ಕಳಿಯ ಗ್ರಾಮದ ತಾರಿದಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅಶ್ವಥ್ ರವರು ಸದ್ರಿ ದ್ವಿಚಕ್ರ ವಾಹನವನ್ನು ದುಡುಕುತನದಿಂದ ಸವಾರಿ ಮಾಡಿದ ಪರಿಣಾಮ, ಅನುಷ ಹಾಗೂ ರಿದ್ವಿನ್ ಹಾಗೂ ಅಶ್ವಥ್ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಗಾಯಾಳುಗಳು ಚಿಕತ್ಸೆಗಾಗಿ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 87/2024 ಕಲಂ: 281, 125(A), BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a Comment

error: Content is protected !!