27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya
error: Content is protected !!