25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್ ಆಲಡ್ಕ ಬೆಳ್ತಂಗಡಿ ಇವರ “ಮಧುಮಕ್ಷಿಕ” ಎಂಬ ಹೆಸರಿನ ಜೇನು ಸಾಕಾಣಿಕಾ, ಸಂಸ್ಕರಣಾ ಘಟಕಕ್ಕೆ ಭೇಟಿ ಕೈಗೊಳ್ಳಲಾಯಿತು.

ಇವರು ತುಡುವೆ ಜೇನು, ನಸರಿ ಜೇನು ಮಾರಾಟದ ಜೊತೆಗೆ ಜೇನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು ಯುವ ಜೇನು ಕೃಷಿಕರಿಗೆ ಮಾದರಿ ಆಗಿದ್ದಲ್ಲದೆ ಅನೇಕ ತರಬೇತಿಯನ್ನು ನೀಡಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುತ್ತಾರೆ. ಇವರ ಜೇನಿನ ಮೌಲ್ಯ ವರ್ಧಿತ ಉತ್ಪನ್ನಗಳೆಂದರೆ ಜೇನುತುಪ್ಪದಿಂದ ತಯಾರಿಸಿದ ಲೇಹ್ಯ (ಮಧು ಕಲ್ಪ) ಸಿರಪ್ (ಮಧುಸಾರ), ಶರಬತ್ (ಮಧುಪೇಯರಸ), ಜೇನು, ನೆಲ್ಲಿಕಾಯಿ ಮತ್ತು ಬೆಲ್ಲ ಹಾಕಿ ಮಾಡಿರುವ ಎರಡು ರೀತಿಯ ಚಟ್ ಪಟ್ ಕ್ಯಾಂಡಿ, ಜೇನು ಮೇಣದ ಸೌಂದರ್ಯ ವರ್ಧಕ ಕ್ರೀಮ್ ಇತ್ಯಾದಿ. ಆಸಕ್ತರು ಅವರ ಜಾಲತಾಣ https://madhumakshika.com/ ಕೇ ಭೇಟಿ ನೀಡಬಹುದು.

ಪ್ರಭಾಕರ ಮಯ್ಯ ಪ್ರಗತಿಪರ ಕೃಷಿಕರು ಸುರ್ಯ, ನಡ ಗ್ರಾಮ ಬೆಳ್ತಂಗಡಿ ತಾ. ಇವರು ಪ್ರಾತ್ಯಕ್ಷಿಕೆ ವೇಳೆ ರೈತರಿಗೆ ಮಾಹಿತಿ ನೀಡಿದರು. ಹಾಗೂ ಬೆಳಿಗ್ಗಿನ ಅವಧಿಯಲ್ಲಿ ಮಲ್ಲಿಗೆ ಕೃಷಿ ಕುರಿತು ತರಬೇತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya
error: Content is protected !!