25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಡಂತ್ಯಾರು ವಲಯ ಮಚ್ಚಿನ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್ ನಾಯ್ಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಕ್ರಮ ಉದ್ಘಾಟಿಸಿ ವಿಶ್ವ ಸಂಸ್ಥೆ ಗುರುತಿಸಿದ ಆರು ಮಾರಕ ಕಾಯಿಲೆಗಳಲ್ಲಿ ಮಾದಕ ಚಟವು ಕೂಡ ಒಂದು. ಯಾವುದೇ ಚಟಗಳು ಮಿತಿ ಮೀರಿದಾಗ ಅದಕ್ಕೆ ಮನಸ್ಸು ಹೊಂದಿಕೊಳ್ಳುತ್ತದೆ .ಇಡೀ ಪ್ರಪಂಚದಲ್ಲಿ ಒಂದನೆಯ ಸೈಲೆಂಟ್ ಕಿಲ್ಲರ್ ಧೂಮಪಾನ ,ಎರಡನೆಯದ್ದು ಮದ್ಯಪಾನ ಹಾಗಾಗಿ ವಿದ್ಯಾರ್ಥಿಗಳು ಇಂಥಹ ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಕಲಿಕೆಯ ಜೊತೆಗೆ ಜೀವನದ ಪಾಠದಲ್ಲಿ ಕೂಡ ಉತ್ತೀರ್ಣರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲ್ಲೂಕಿನ ಸಮಿತಿ ಸದಸ್ಯರಾದ ಗೋಪಾಲ್ ಕೊಲಾಜೆ, ವಲಯ ಅಧ್ಯಕ್ಷ ಜಯ ಪೂಜಾರಿ, ಮಚ್ಚಿನ ಸತ್ಯ ನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್, ಕುದ್ರಡ್ಕ ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya
error: Content is protected !!