25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಪ್ರಮುಖ ಸುದ್ದಿಬೆಳ್ತಂಗಡಿ

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹೊಸಂಗಡಿ-ಕರಿಮಣೇಲು, ಪ್ರಗತಿ ಬಂಧು ಸ್ವಸಹಾಯ ಜ್ಞಾನ ವಿಕಾಸ ಸಂಘಗಳ ಒಕ್ಕೂಟ ಹೊಸಂಗಡಿ ಇದರ ವತಿಯಿಂದ ನಡೆಯುತ್ತಿರುವ 21 ವರುಷದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯು ಆ.23ರಂದು ಪೆರಿಂಜೆ ಸಂತೃಪ್ತಿ ಸಭಾಭವನದಲ್ಲಿ ಜರುಗಿತು.

ಸಂಸಾರದಲ್ಲಿ ಸಂಸ್ಕಾರ ಮೌಲ್ಯದ ಬಗ್ಗೆ, ಹಾಗೂ ಮಕ್ಕಳಿಗೆ ಧರ್ಮ ಪಾಲನೆಯ ಬಗ್ಗೆ ಹೆತ್ತವರ ಜವಾಬ್ದಾರಿಯ ಬಗ್ಗೆ ಎಸ್.ಡಿ.ಎಮ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ ಇಚಿಳಂಪಾಡಿ ಧಾರ್ಮಿಕ ಉಪನ್ಯಾಸ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮುಖಾಂತರ ಹಲವಾರು ಸಾಮಾಜಿಕ ಕಾರ್ಯಕ್ರಮ ನಡೆಯುತ್ತಿದ್ದು ಗ್ರಾಮ ಗ್ರಾಮದ ಅಭಿವೃದ್ಧಿಗೆ ಪೂಜ್ಯರ ಕೊಡುಗೆ ಅಪಾರ ಎಂದು ಮಾನವ ಸಂಪನ್ಮೂಲ ವಿಭಾಗ ಕೇಂದ್ರ ಕಚೇರಿ ನಿರ್ದೇಶಕರಾದ ಸುರೇಶ್ ಮೊಯಿಲಿ ತಿಳಿಸಿದರು, ಹೊಸಂಗಡಿ ಗ್ರಾಮದಲ್ಲಿ ಕಳೆದ 40 ವರ್ಷದಿಂದ ಆಗಿರುವಂತಹ ಬದಲಾವಣೆಗೆ ಪೂಜ್ಯರ ಕೊಡುಗೆ ಅಪಾರ, ಅವರಿಗೆ ನಾವು ಯಾವಾಗಲೂ ಚಿರಋಣಿಯಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಧರಣೇಂದ್ರ ಕುಮಾರ್ ತಿಳಿಸಿದರು.

ಸರ್ಕಾರದ ಮೂಲಕ ಆಗಬೇಕಾಗಿರುವ ಕೆಲಸ ಕಾರ್ಯಗಳನ್ನು ಪೂಜ್ಯರು ತಾವೇ ಸ್ವತಹ ಪ್ರೀತಿಯಿಂದ ಗ್ರಾಮ ಗ್ರಾಮಗಳ ಅಭಿವೃದ್ಧಿಗೆ ಶ್ರಮ ವಹಿಸುತ್ತಿದ್ದಾರೆ ಎಂದು ಶಂಕರ್ ಭಟ್ ಬಾಲ್ಯ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿರುವ ಅನುವಂಶಿಯ ಆಡಳಿತದಾರರು ಶ್ರೀ ಕ್ಷೇತ್ರ ಪಡ್ಯರಾಬೆಟ್ಟು ಜಿವಂದರ್ ಕುಮಾರ್ ರವರು ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಅದರ ಆಚರಣೆಯ ಬಗ್ಗೆ ಶುಭ ಹಾರೈಸಿದರು .

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ , ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು , ಸುಜ್ಞಾನಿಧಿ ಶಿಷ್ಯವೇತನ ಪಡೆಯುತ್ತಿರುವ ಎರಡು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಮಂಜುರಾತಿ ಪತ್ರ ವಿತರಿಸಲಾಯಿತು, ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸ್ವಾಗತಿಸಿದರು. ಜಯಲಕ್ಷ್ಮಿ ವರದಿ ವಾಚಿಸಿದರು, ಹೊಸಂಗಡಿ ಸೇವಾ ಪ್ರತಿನಿಧಿಯರಾದ ಹರೀಶ್ ರವರು ವಂದಿಸಿದರು.

Related posts

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!