July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

ಕನ್ಯಾಡಿ-2: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು .ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು ಇದರ ಪ್ರಯುಕ್ತ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಯಲ್ಲಿ ಆಚರಿಸಲಾಯಿತು.


ಆ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಷೇಶತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಬಹಳ ಅರ್ಥವತ್ತಾಗಿ ಆಚರಿಸಲಾಯಿತು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya
error: Content is protected !!