23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆ.23 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟು ಇಲ್ಲಿ ನಡೆದ ವಲಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವೀರೋಚಿತ ಆಟದ ಪ್ರದರ್ಶನಗಳನ್ನು ನೀಡಿದ ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ಫೈನಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದೆ.


ತಂಡದಲ್ಲಿ ಸುಹೈಲ್(7ನೇ ತರಗತಿ) ಬೆಸ್ಟ್ ರೈಡರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರೆ, ಸಫ್ವಾನ್ (7ನೇ), ಶಾದ್ದಾದ್ (7ನೇ), ಆಶಿರ್ ಜವಾದ್ (7ನೇ), ಶಮ್ಮಾಸ್ (7ನೇ), ಇಶಾಮ್ ಅಲಿ (7ನೇ), ಮಹಮ್ಮದ್ ಫಾಜ್ (7ನೇ), ಮೊಹಮ್ಮದ್ ಆಶಿರ್ (7ನೇ), ಸುಫೈನ್ (7ನೇ), ಸಾಬಿತ್(7ನೇ), ತಮೀಮ್ (6ನೇ), ಆಶಿಮ್(6ನೇ) ಇವರು ಕಡೆಯವರೆಗೂ ಪಂದ್ಯಾಟಗಳ ಸ್ಥಿತಿಯನ್ನೇ ಬದಲಾಯಿಸಿ ಮನ್ ಶರ್ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಲು ಪ್ರಮುಖ ಪಾತ್ರ ವಹಿಸಿದರು.


ಪಂದ್ಯಾಟದ ಸಮಯದಲ್ಲಿ ಹಾಗೆಯೇ ಸಮಾರೋಪ ಕಾರ್ಯಕ್ರಮದಲ್ಲಿ ಮನ್ ಶರ್ ವಿದ್ಯಾಸಂಸ್ಥೆಯ ಶಿಕ್ಷಕಿಯರಾದ ರಮ್ಯಾ ಆರ್ ಹಾಗೂ ಸುಧಾ ಬಿ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!