24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಕೆಲವೊಂದು ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಪ್ರಸ್ತುತ ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲೂ ಕೂಡಾ ಅವಕಾಶ ಕಲ್ಪಿಸಿರುತ್ತದೆ. ಜೀವಮಾಪನ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡುವುದು. ಸರಕಾರವು ಆ.31 ರವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಜೀವಮಾಪನ ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿ ಕೊಳ್ಳಬೇಕು.

ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿ ಕೊಳ್ಳಲು ಅವಕಾಶವಿದೆ. ಪಡಿತರಚೀಟಿದಾರರ ಎಲ್ಲಾ ಸದಸ್ಯರ ಬಯೋದೃಢೀಕರಣ ಮಾಡಿಸಬೇಕು. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ದೃಢಪತ್ರ,ಆಧಾರ್ ಸಂಖ್ಯೆ, ಫೋನ್ ನಂಬರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಜಿಲ್ಲೆಯ ಹಾಗೂ ಪರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿ ಕೊಳ್ಳದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ರದ್ದಾಗಬಹುದು. ಪಡಿತರ ಚೀಟಿಗಳಲ್ಲಿ ಭಾಗಶ: ಜೀವಮಾನ ನೀಡಲ್ಪಟ್ಟು ಬಾಕಿ ಉಳಿದಿರುವ ಸದಸ್ಯರು ಕೂಡಾ ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿ ಕೊಂಡು ಪಡಿತರ ಚೀಟಿಯನ್ನು ಊರ್ಜಿತವಾಗಿರಿಸಿಕೊಳ್ಳಬಹುದಾಗಿರುತ್ತದೆ

Related posts

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!